×
Ad

ಅಸೈಗೋಳಿ: ಯುವಕನಿಗೆ ತಂಡದಿಂದ ಚೂರಿ ಇರಿತ; ಓರ್ವ ಪೊಲೀಸ್ ವಶಕ್ಕೆ

Update: 2018-09-30 22:45 IST

ಕೊಣಾಜೆ, ಸೆ. 30: ಅಸೈಗೋಳಿ ಬಳಿ ಯುವಕನೋರ್ವನಿಗೆ ತಂಡವೊಂದು ಚೂರಿಯಿಂದ ಇರಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಕೊಣಾಜೆ ಪೊಲೀಸರು ಆರೋಪಿಯೋರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅಸೈಗೋಳಿಯಲ್ಲಿ ವಾಸವಾಗಿರುವ ಹಾವೇರಿ ಮೂಲದ ರಮೇಶ್ (26) ಚೂರಿ ಇರಿತಕ್ಕೊಳಗಾದ ಯುವಕ ಎಂದು ಗುರುತಿಸಲಾಗಿದೆ. ಇರಿತದಿಂದ ಗಾಯ ಗೊಂಡಿರುವ ರಮೇಶ್ ರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಸೈಗೋಳಿ ಜಂಕ್ಷನ್ ಬಳಿ ನಿಂತಿದ್ದ ರಮೇಶ್ ರಿಗೆ ಮೂವರ ತಂಡವೊಂದು ಚೂರಿಯಿಂದ ಇರಿದಿದ್ದು, ಈ ಸಂದರ್ಭ ಜನ ಸೇರಿದಾಗ ತಂಡ ಅಲ್ಲಿಂದ ಪರಾರಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸವಾಝ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕೊಣಾಜೆ ಠಾಣೆ ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News