ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವು
Update: 2018-09-30 23:22 IST
ಶ್ರೀರಂಗಪಟ್ಟಣ, ಸೆ.30: ತುಂಡರಿಸಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವಿಗೀಡಾಗಿರುವ ಘಟನೆ ತಾಲೂಕಿನ ಹುಂಜನಕೆರೆ ಬಳಿ ನಡೆದಿದೆ.
ಗ್ರಾಮದ ಕುಂತಯ್ಯ ಮೃತಪಟ್ಟ ವ್ಯಕ್ತಿಯಾಗಿದ್ದು, ಶನಿವಾರ ಸಂಜೆ ಜಮೀನಿನ ಬಳಿ ತರೆಳಿದ್ದಾಗ ಘಟನೆ ನಡೆದಿದೆ.
ಸ್ಥಳಕ್ಕೆ ಸೆಸ್ಕ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ಮಾಡಿದ್ದು, ಎರಡು ಲಕ್ಷ ರೂ. ಪರಿಹಾರವನ್ನು ನೀಡಿದ್ದಾರೆ. ಅರಕೆರೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.