ಚಿಕ್ಕಮಗಳೂರು: ಅಕ್ರಮ ಮರಳು ಸಂಗ್ರಹಣೆ; ಟ್ರ್ಯಾಕ್ಟರ್ ಸೇರಿ ಮೂವರ ಬಂಧನ

Update: 2018-10-04 12:50 GMT

ಚಿಕ್ಕಮಗಳೂರು, ಅ.4: ಅಕ್ರಮ ಮರಳು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಟ್ರ್ಯಾಕ್ಟರ್ ಸೇರಿದಂತೆ ಮೂವರನ್ನು ಬಂಧಿಸಿರುವ ಘಟನೆ ಗುರುವಾರ ನಡೆದಿದೆ. 

ಮೂಡಿಗೆರೆ ತಾಲೂಕಿನ ಭೈರದೇವ ಗದ್ದೆ ಅರಣ್ಯ ಪ್ರದೇಶದಲ್ಲಿ ಅಕ್ರಮ ಮರಳು ಸಂಗ್ರಹಿಸಿರುವ ಖಚಿತ ಮಾಹಿತಿ ಮೇರೆಗೆ ಮೂಡಿಗೆರೆ ಸರ್ಕಲ್ ಇನ್‍ಸ್ಪೆಕ್ಟರ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಟ್ರಾಕ್ಟರ್ ಹಾಗೂ ಮೂವರನ್ನು ಬಂದಿಸಿದ್ದಾರೆ. 

ಮೂಡಿಗೆರೆ ತಾಲೂಕಿನ ಬೈರದೇವ ಗದ್ದೆ ಮೀಸಲು ಅರಣ್ಯ ಪ್ರದೇಶದಲ್ಲಿ  ಕಳೆದ ಐದು ವರ್ಷಗಳಿಂದ ಅಕ್ರಮ ಮರಳು ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಪಡೆದ ಪೊಲೀಸರ ತಂಡ ಗುರುವಾರ ದಾಳಿ ನಡೆಸಿದ್ದಾರೆಂದು ತಿಳಿದು ಬಂದಿದೆ. ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News