ಸುಂಟಿಕೊಪ್ಪ: ಅಪ್ರಾಪ್ತ ಬಾಲಕಿ ನೇಣು ಬಿಗಿದು ಆತ್ಮಹತ್ಯೆ
Update: 2018-10-05 13:24 GMT
ಸುಂಟಿಕೊಪ್ಪ,ಅ.5: ಅಪ್ರಾಪ್ತ ಬಾಲಕಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಕೊಂಡಿರುವ ಘಟನೆ ಬೆಟ್ಟಗೇರಿ ತೋಟದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಕುಶಾಲನಗರದ ಶಾಲೆಯೊಂದರಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸಿಂಚನಾ ಹಾಸ್ಟೆಲ್ ನಲ್ಲಿದ್ದುಕೊಂಡು ಶಿಕ್ಷಣ ಪಡೆಯುತ್ತಿದ್ದಳು. ಗಾಂಧಿ ಜಯಂತಿ ರಜೆ ಹಿನ್ನಲೆ ಮನೆಗೆ ಆಗಮಿಸಿದ್ದ ಆಕೆ ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಗುರುವಾರ ಬೆಟ್ಟಗೇರಿ ತೋಟದ ಲೈನ್ ಮನೆಗೆ ಬಂದ ಈಕೆ ಮನೆಯಲ್ಲಿ ಅಜ್ಜಿ ಮಾತ್ರ ಇದ್ದ ಸಂದರ್ಭ ಕುತ್ತಿಗೆಗೆ ವೇಲಿನಿಂದ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ವಿಷಯವರಿತ ಅಕ್ಕಪಕ್ಕದವರು ಕೂಡಲೇ ಸುಂಟಿಕೊಪ್ಪ ಸರ್ಕಾರಿ ಆಸ್ಪತ್ರೆಗೆ ಕರೆತಂದರಾದರೂ ಆದಾಗಲೇ ಸಿಂಚನ ಮೃತಪಟ್ಟಿದ್ದಳು.
ಆತ್ಮಹತ್ಯೆಗೆ ನಿಖರ ಕಾರಣ ತನಿಖೆಯಿಂದ ತಿಳಿಯಬೇಕಾಗಿದೆ.