150ನೇ ಗಾಂಧಿ ಜಯಂತಿ ಪ್ರಯುಕ್ತ ಸನ್ನಡತೆ ತೋರಿದ 48 ಕೈದಿಗಳಿಗೆ ಮುಕ್ತಿ

Update: 2018-10-05 14:43 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.5: 150ನೆ ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಅಧಿಸೂಚನೆಯಂತೆ ಸನ್ನಡತೆ ತೋರಿದ 48 ಕೈದಿಗಳನ್ನು ಬಿಡುಗಡೆ ಮಾಡಲಾಯಿತು.

ಬೆಂಗಳೂರು, ಮೈಸೂರು, ಕಲಬುರ್ಗಿ, ಶಿವಮೊಗ್ಗ, ವಿಜಯಪುರ, ಬಳ್ಳಾರಿ, ಧಾರವಾಡ ಸೇರಿದಂತೆ ಒಟ್ಟು 47 ಪುರುಷ ಕೈದಿಗಳು ಹಾಗೂ ಓರ್ವ ಮಹಿಳಾ ಕೈದಿ ಸನ್ನಡತೆಯ ಆಧಾರದ ಮೇಲೆ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಒಟ್ಟು 15 ಕೈದಿಗಳನ್ನ ಬಿಡುಗಡೆ ಮಾಡಲಾಯಿತು.

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ ಸುರೇಶ್ ಹಾಗೂ ಜೈಲಿನ ಹಿರಿಯ ಅಧಿಕಾರಿಗಳು ಕೈದಿಗಳನ್ನು ಉದ್ದೇಶಿಸಿ ಮಾತನಾಡಿದರು. ಜೈಲಿನಲ್ಲಿ ಇರುವಾಗ ಒಳ್ಳೆ ರೀತಿಯ ನಡತೆ ತೋರಿದ್ದೀರಿ. ಹಾಗೆಯೇ ಮುಂದೆ ಸಮಾಜದಲ್ಲೂ ಇದೇ ರೀತಿಯ ನಡತೆ ತೋರಿ ಎಂದು ಸಲಹೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News