ಮುಂಡಗೋಡ: ಹೊಂಡಕ್ಕೆ ಹಾರಿ ವೃದ್ದೆ ಆತ್ಮಹತ್ಯೆ

Update: 2018-10-05 15:52 GMT

ಮುಂಡಗೋಡ,ಅ.5: ಹೊಂಡಕ್ಕೆ ಹಾರಿ ವೃದ್ದೆಯೊರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದಲ್ಲಿ ನಡೆದಿದೆ.

ಕಂಬಾರಗಟ್ಟಿ ಪ್ಲಾಟಿನ ನಿವಾಸಿ ಪಟ್ಟಣದ ಬಸವನ ಹೊಂಡದಲ್ಲಿ ಆತ್ಮಹತ್ಯೆ ವೃದ್ಧೆ ಮಾಡಿಕೊಂಡಿದ್ದಾರೆ. ಮೃತ ವೃದ್ಧೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ಎನ್ನಲಾಗಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಬುಧವಾರ ಬಸವನಹೊಂಡದಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News