ಮನಾಮಾ: ಅಂತರ್ ರಾಷ್ಟ್ರೀಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Update: 2018-10-06 13:26 GMT

ಬಹರೈನ್, ಅ.6: ಇಲ್ಲಿನ ಮನಾಮಾದ ಇಂಡಿಯನ್ ಕ್ಲಬ್‌ನಲ್ಲಿ ನಡೆಯುವ ಎರಡು ದಿನಗಳ ಅಂತರ್ ರಾಷ್ಟ್ರೀಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶುಕ್ರವಾರ ವಿದ್ಯುಕ್ತ ಚಾಲನೆ ದೊರಕಿತು.

ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು, ಕನ್ನಡ ಸಂಘ ಬಹರೈನ್ ಹಾಗೂ ಹಂಪಿ ವಿಶ್ವವಿದ್ಯಾನಿಲಯದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ ಈ ಸಮ್ಮೇಳನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಡಾ.ಜಯಮಾಲಾ ಉದ್ಘಾಟಿಸಿದರು.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್, ಕನ್ನಡ ಸಂಘದ ಅಧ್ಯಕ್ಷ ಪ್ರದೀಪ್ ಶೆಟ್ಟಿ, ಹಂಪಿ ವಿವಿ ಕುಲಪತಿ ಮಲ್ಲಿಕಾ ಘಂಟಿ ಮೊದಲಾದವರು ಉಪಸ್ಥಿತರಿದ್ದರು.

Writer - ವರದಿ: ಕಮಲಾಕ್ಷ ಅಮೀನ್

contributor

Editor - ವರದಿ: ಕಮಲಾಕ್ಷ ಅಮೀನ್

contributor

Similar News