×
Ad

ಬಿಲ್ಲುಬೈಲು ಸುರೇಶ ಶೆಟ್ಟಿ ನಿಧನ

Update: 2018-10-06 19:49 IST

ಹೆಬ್ರಿ, ಅ. 6: ಶಿವಪುರದ ಧಾರ್ಮಿಕ ಮುಂದಾಳು, ಸಹಕಾರಿ ಧುರೀಣ ಹಾಗೂ ಕಾಂಗ್ರೆಸ್ ಮುಖಂಡ ಬಿಲ್ಲುಬೈಲು ಸುರೇಶ ಶೆಟ್ಟಿ (54) ಶನಿವಾರ ಮುಂಜಾನೆ ಹೃದಯಾಘಾತದಿಂದ ನಿಧನರಾದರು. ಅವರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

ಧಾರ್ಮಿಕ, ಸಹಕಾರಿ, ರಾಜಕೀಯ, ಸಮಾಜಸೇವೆಯಲ್ಲಿ ಸಕ್ರಿಯರಾಗಿ ತಮ್ಮನ್ನು ತೊಡಗಿಸಿಕೊಂಡಿದ್ದ ಅಜಾತಶತ್ರು ಬಿಲ್ಲುಬೈಲು ಸುರೇಶ ಶೆಟ್ಟಿ, ಶಿವಪುರ ಸಹಕಾರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ, ಶಿವಪುರ ಶಂಕರದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ರಾಜೀವ ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ಹೆಬ್ರಿ ಬ್ಲಾಕ್ ಅಧ್ಯಕ್ಷ, ಶಿವಪುರ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಸೇರಿದಂತೆ ವಿವಿಧ ಸಂಘಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು. ಪರೋಪಕಾರಿಯಾಗಿ ನಿರಂತರ ಜನಸೇವೆಯಲ್ಲಿ ನಿರತಾಗಿದ್ದರು.

 ಅಂತಿಮ ದರ್ಶನ: ಕಾರ್ಕಳ ಶಾಸಕ ಸುನೀಲ್ ಕುಮಾರ್, ಮಾಜಿ ಶಾಸಕ ಗೋಪಾಲ ಭಂಡಾರಿ, ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ, ಮಾಜಿ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆ ಸಹಾಯಕ ಆಯುಕ್ತ ಗೋಕುಲದಾಸ ನಾಯಕ್, ಹೆಬ್ರಿ ಕಾಂಗ್ರೆಸ್ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಕುಂದಾಪುರ ಕಾಂಗ್ರೆಸ್ ನಾಯಕ ಮಲ್ಯಾಡಿ ಶಿವರಾಮ ಶೆಟ್ಟಿ ಸೇರಿದಂತೆ ಸಾವಿರಾರು ಮಂದಿ ಅಂತಿಮ ದರ್ಶನ ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News