ಬಳ್ಳಾರಿಗೆ ಬಿಜೆಪಿ ಅಭ್ಯರ್ಥಿ ಆಯ್ಕೆ , ಗೆಲ್ಲಿಸುವ ಜವಾಬ್ದಾರಿ ಶ್ರೀರಾಮುಲು ಹೆಗಲಿಗೆ : ಬಿಎಸ್ ವೈ

Update: 2018-10-08 07:10 GMT

ಬೆಂಗಳೂರು, ಅ.8: ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯ ಆಯ್ಕೆ ಮತ್ತು ಗೆಲ್ಲಿಸುವ ಜವಾಬ್ದಾರಿಯನ್ನು ಮೊಳಕಾಲ್ಮೂರು ಕ್ಷೇತ್ರದ ಶಾಸಕ ಶ್ರೀರಾಮುಲು ಅವರಿಗೆ ವಹಿಸಿಕೊಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶ್ರೀ ರಾಮುಲು ಸೂಚಿಸಿದ ಅಭ್ಯರ್ಥಿಯನ್ನೇ ಆಯ್ಕೆ ಮಾಡಲಾಗುವುದು. ವರಿಷ್ಠರು ಈಗಾಗಲೇ ಶ್ರೀರಾಮುಲು ಅವರಿಗೆ ಈ ಸಂಬಂಧ ಸೂಚನೆ ನೀಡಿದ್ದಾರೆ ಎಂದರು.

ನಾಳೆ ಅಥವಾ ನಾಡಿದ್ದು ನಡೆಯಲಿರುವ ಕೋರ್ ಸಮಿತಿ ಸಭೆಯಲ್ಲಿ  ವಿವಿಧ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಮಾಡಿ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್ ಗೆ ಕಳುಹಿಸಿಕೊಡಲಾಗುವುದು ಎಂದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಸ್ಪರ್ಧಿಸುವ ವಿಚಾರ ಸತ್ಯಕ್ಕೆ ದೂರವಾದುದು ಎಂದು ಬಿಎಸ್ ವೈ ಸ್ಪಷ್ಟಪಡಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News