ಸುಳ್ಯ: ವಿದ್ಯುತ್ ಆಘಾತಕ್ಕೆ ಯುವಕ ಬಲಿ

Update: 2018-10-08 08:11 GMT

ಸುಳ್ಯ, ಅ. 8: ಕೆಲಸ ನಿರ್ವಹಿಸುತ್ತಿದ್ದ ಗ್ಯಾರೇಜ್ ನಲ್ಲಿ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಸುಳ್ಯದ ಗಾಂಧಿನಗರ, ಗುರುಂಪು ಎಂಬಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. 

ದುಗ್ಗಲಡ್ಕ ನಿವಾಸಿ ಗಂಗಾಧರ್ ಎಂಬವರ ಪುತ್ರ ನಾಗರಾಜ್ (18) ಮೃತರು ಎಂದು ಗುರುತಿಸಲಾಗಿದೆ.

ಗುರುಂಪು ನಲ್ಲಿರುವ ಗ್ಯಾರೇಂಜೊಂದರಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ್ ರಿಗೆ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News