ಲೋಕಸಭೆ ಉಪಚುನಾವಣೆಯಿಂದ ಹಣ, ಸಮಯ ಹಾಳು: ಶಾಸಕ ಸುರೇಶ್‍ಗೌಡ

Update: 2018-10-08 17:07 GMT

ನಾಗಮಂಗಲ, ಅ.8: ರಾಜ್ಯದಲ್ಲಿ ಮೈತ್ರಿ ಸರಕಾರವಿದ್ದರೂ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್‍ಗೆ ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ಶಾಸಕ ಕೆ.ಸುರೇಶ್‍ಗೌಡ ಹೇಳಿದ್ದಾರೆ.

ತಾಲೂಕಿನ ಬ್ರಹ್ಮದೇವರಹಳ್ಳಿಯಲ್ಲಿ ಶನಿವಾರ ನಡೆದ ಸಭೆಯೊಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನಿಂದ ಮಾಜಿ ಸಂಸದೆ ರಮ್ಯಾ ಸ್ಪರ್ಧಿಸಿದರೂ ಜೆಡಿಎಸ್ ಅಭ್ಯರ್ಥಿ ಇದ್ದೇ ಇರುತ್ತಾರೆ ಎಂದರು.

ನಮ್ಮ ಪಕ್ಷದಲ್ಲಿ ಎಷ್ಟೇ ಜನ ಆಕಾಂಕ್ಷಿಗಳಿದ್ದರೂ ವರಿಷ್ಠರ ತೀರ್ಮಾನವೇ ಅಂತಿಮ. ಯಾರೇ ಅಭ್ಯರ್ಥಿಯಾದರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸುತ್ತೇವೆ. ಜೆಡಿಎಸ್ ಗೆಲುವು ಖಚಿತ ಎಂದು ಅವರು ತಿಳಿಸಿದರು.

ಪ್ರಸ್ತುತ ಉಪಚುನಾವಣೆ ಅಗತ್ಯ ಇರಲಿಲ್ಲ. ಇದರಿಂದ ಹಣ ಮತ್ತು ಸಮಯ ವ್ಯರ್ಥ. ನಿರೀಕ್ಷೆ ಇಲ್ಲದಿದ್ದರೂ ಚುನಾವಣೆ ಎದುರಾಗಿದೆ ಎಂದು ಅಭಿಪ್ರಾಯಪಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News