ವಿ.ಪಿ.ದೀನದಯಾಳು ನಾಯ್ಡು ಜನ್ಮಶತಮಾನೋತ್ಸವ ಸಮಾರೋಪ

Update: 2018-10-09 06:02 GMT

ಬೆಂಗಳೂರು, ಅ.9: ವಿ.ಪಿ.ದೀನದಯಾಳು ನಾಯ್ಡು ಜನ್ಮಶತಮಾನೋತ್ಸವ ಸಮಾರೋಪ ಸಮಾರಂಭವು ಇಂದು ಬೆಳಗ್ಗೆ ಅರಮನೆ ರಸ್ತೆಯ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಭಾಗವಹಿಸಿದ್ದರು.

ರಾಜ್ಯಪಾಲ ವಾಜುಬಾಯಿ ರುಡಬಾಯಿ ವಾಲಾ, ಸಚಿವ ಯು.ಟಿ.ಖಾದರ್, ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮೊದಲಾದವರು ಅತಿಥಿಗಳಾಗಿ ಉಪಸ್ಥಿತರಿದ್ದರು.

*ಉಪರಾಷ್ಟ್ರಪತಿಗೆ ಸ್ವಾಗತ: ಇದಕ್ಕೂ ಮೊದಲು ಕಾರ್ಯಕ್ರಮದಲ್ಲಿ ಭಾಗವಹಿಸಲು ದಿಲ್ಲಿಯಿಂದ ಎಚ್‌ಎಎಲ್ ವಿಮಾನ ನಿಲ್ದಣದಲ್ಲಿ ವಿಮಾನದ ಮೂಲಕ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರನ್ನು ರಾಜ್ಯಪಾಲ ವಾಜುಭಾಯಿ ವಾಲಾ ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಭೈರೇಗೌಡ, ಮೇಯರ್ ಗಂಗಾಂಬಿಕಾ, ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್‌ ಜೊತೆಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News