ಚಾಮರಾಜನಗರ: ಜಿಲ್ಲೆಯಾದ್ಯಂತ ಭಾರಿ ಮಳೆ; ಭರ್ತಿಯಾದ ಹೂಗ್ಯಂ ಜಲಾಶಯ

Update: 2018-10-09 13:23 GMT
ಸಾಂದರ್ಭಿಕ ಚಿತ್ರ

ಚಾಮರಾಜನಗರ,ಅ.9 :ಕರ್ನಾಟಕ ಮತ್ತು ತಮಿಳುನಾಡಿನ ಗಡಿಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಗಡಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೂಗ್ಯಂ ಜಲಾಶಯ ಭರ್ತಿಯಾಗಿದ್ದು, ಗುಂಡ್ಲುಪೇಟೆಯಲ್ಲಿ ಮಳೆ ನೀರು ರೈತರ ಜಮೀನಿಗಳಿಗೆ ನುಗ್ಗಿ ಬೆಳೆದ ಫಸಲು ನಾಶವಾಗಿದೆ.

ಉಭಯ ರಾಜ್ಯಗಳ ಗಡಿಯಲ್ಲಿರುವ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆ ನೀರು ತಗ್ಗು ಪ್ರದೇಶಗಳಿಗೆ ಹರಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಬೆಳೆ ನಾಶವಾಗಿದೆ ಎಂದು ತಿಳಿದುಬಂದಿದೆ.

ಹನೂರು ತಾಲೂಕಿನ ನಾಲರೋಡ್ ಬಳಿ ಇರುವ ಹೂಗ್ಯಂ ಜಲಾಶಯ ಮಂಗಳವಾರ ಭರ್ತಿಯಾಗಿದ್ದು, ಹೆಚ್ಚುವರಿ ನೀರು ಕಾಲುವೆ ಮೂಲಕ ನದಿ ಪಾತ್ರಕ್ಕೆ ಸೇರುತ್ತಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News