ಮಣಿಪಾಲ ಎಂಐಟಿ ಕಟ್ಟಡದಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ
Update: 2018-10-09 17:02 GMT
ಮಣಿಪಾಲ, ಅ.9: ಮಣಿಪಾಲ ಎಂಐಟಿ ವಿದ್ಯಾರ್ಥಿಯೋರ್ವ ಕಟ್ಟಡ ದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ತೆಲಂಗಾಣದ ವೆಂಕಟೇಶ್ ಎಂಬವರ ಮಗ ಅವಿನಾಶ್ (17) ಎಂದು ಗುರುತಿಸಲಾಗಿದೆ. ಎಂಐಟಿ ವಿದ್ಯಾರ್ಥಿಯಾಗಿದ್ದ ಈತ ಜೀವನದಲ್ಲಿ ಜಿಗುಪ್ಸೆಗೊಂಡು ಮಣಿಪಾಲ ಎಂಐಟಿ ಕ್ಯಾಂಪಸ್ನ ಕಟ್ಟಡದಿಂದ ಹಾರಿದ್ದ ಎನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಅವಿನಾಶ್ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಎಂದು ತಿಳಿದುಬಂದಿದೆ. ಈತ ತನ್ನ ತಂದೆಗೆ ಮೊಬೈಲ್ ಸಂದೇಶ ಕಳುಹಿಸಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.