ಬೆಂಗಳೂರು: ಎರಡನೆ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು

Update: 2018-10-09 16:10 GMT

ಬೆಂಗಳೂರು, ಅ.9: ಆಯ ತಪ್ಪಿ ಎರಡನೆ ಮಹಡಿಯಿಂದ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಇಲ್ಲಿನ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಹುಳಿಮಾವು ಸಂಜೀನಿನಗರ ನಿವಾಸಿ ರಾಘವೇಂದ್ರ ಮೃತಪಟ್ಟಿರುವ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ.

ರಾಘವೇಂದ್ರ ಸೋಮವಾರ ರಾತ್ರಿ ಅಡುಗೆ ಪಾತ್ರೆಯಲ್ಲಿದ್ದ ನೀರನ್ನು ಎರಡನೆ ಮಹಡಿಯಿಂದ ಕೆಳಕ್ಕೆ ಚೆಲ್ಲಲು ಮುಂದಾದಾಗ ಆಯತಪ್ಪಿ ಕೆಳಕ್ಕೆ ಬಿದ್ದು ತೀವ್ರ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾುತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಸಂಬಂಧ ಹುಳಿಮಾವು ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News