ಎಎಪಿ ಸಚಿವ ಕೈಲಾಶ್‌ಗೆ ಸೇರಿದ 16 ಸ್ಥಳಗಳ ಮೇಲೆ ಐಟಿ ದಾಳಿ

Update: 2018-10-10 05:52 GMT

ಹೊಸದಿಲ್ಲಿ, ಅ.10: ಆದಾಯ ತೆರಿಗೆ ಇಲಾಖೆ ಬುಧವಾರ ದಿಲ್ಲಿ ಸಾರಿಗೆ ಸಚಿವ ಕೈಲಾಶ್ ಗಹ್ಲೊಟ್‌ಗೆ ಸೇರಿದ ಹಲವು ಪ್ರದೇಶಗಳ ಮೇಲೆ ದಾಳಿ ನಡೆಸಿದ್ದಾರೆ. ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಈ ದಾಳಿ ನಡೆದಿದೆ ಎಂದು ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

 ಆದಾಯ ತೆರಿಗೆ ಇಲಾಖೆಯ ಸುಮಾರು 30 ಅಧಿಕಾರಿಗಳು ರಾಜಧಾನಿಯ ಒಳಗೆ ಹಾಗೂ ಹೊರಗಿನ ಸುಮಾರು 16 ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಸಚಿವರ ಹಾಗೂ ಇತರ ಇಬ್ಬರಿಗೆ ಸೇರಿದ ಎರಡು ಕಟ್ಟಡ ನಿರ್ಮಾಣ ಸಂಸ್ಥೆಗಳು ತೆರಿಗೆ ವಂಚಿಸಿರುವ ಪ್ರಕರಣದ ಭಾಗವಾಗಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ಕೈಲಾಶ್ ಅವರು ಅರವಿಂದ್ ಕೇಜ್ರಿವಾಲ್‌ರ ಸರಕಾರದಲ್ಲಿ ಸಾರಿಗೆ, ಕಾನೂನು ಹಾಗೂ ಕಂದಾಯ ಇಲಾಖೆಯ ಸಚಿವರಾಗಿದ್ದಾರೆ. ಕೈಲಾಶ್ ನಜಫ್‌ಗಢ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಶಾಸಕರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News