ಕೇಂದ್ರ ಸಚಿವ ಎಂ.ಜೆ. ಅಕ್ಬರ್ ರಾಜೀನಾಮೆ ನೀಡಲಿ: ಕಾಂಗ್ರೆಸ್ ಒತ್ತಾಯ

Update: 2018-10-10 15:42 GMT

ಹೊಸದಿಲ್ಲಿ,ಅ.10: ಕೇಂದ್ರ ಸಚಿವ ಎಂ.ಜೆ.ಅಕ್ಬರ್ ಅವರು ತನ್ನ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳಿಗೆ ತೃಪ್ತಿಕರ ವಿವರಣೆಯನ್ನು ನೀಡಬೇಕು ಇಲ್ಲವೇ ತಕ್ಷಣವೇ ರಾಜೀನಾಮೆ ಸಲ್ಲಿಸಬೇಕು ಎಂದು ಕಾಂಗ್ರೆಸ್ ಬುಧವಾರ ಆಗ್ರಹಿಸಿದೆ.

ಅಕ್ಬರ್ ನಡವಳಿಕೆಯ ಬಗ್ಗೆ ವಿಚಾರಣೆಗೂ ಅದು ಆಗ್ರಹಿಸಿದೆ.

ಭಾರತದಲ್ಲಿ ‘ ಮೀ ಟೂ’ ಅಭಿಯಾನವು ವೇಗ ಪಡೆದುಕೊಳ್ಳುತ್ತಿದ್ದಂತೆ ಕೆಲವು ಮಹಿಳಾ ಪತ್ರಕರ್ತರು ಮೌನವನ್ನು ಮುರಿದು,ಮಾಜಿ ಸಂಪಾದಕ ಹಾಗೂ ಹಾಲಿ ಸಹಾಯಕ ವಿದೇಶಾಂಗ ವ್ಯವಹಾರಗಳ ಸಚಿವ ಅಕ್ಬರ್ ಅವರು ಪತ್ರಕರ್ತರಾಗಿದ್ದಾಗ ತಮಗೆ ಲೈಂಗಿಕ ಕಿರುಕುಳವನ್ನು ನೀಡಿದ್ದರು ಎಂದು ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅಕ್ಬರ್ ರಾಜೀನಾಮೆಗೆ ಒತ್ತಾಯಿಸಿದ ಕಾಂಗ್ರೆಸ್ ವಕ್ತಾರ ಎಸ್.ಜೈಪಾಲ ರೆಡ್ಡಿ ಅವರು,ಅಕ್ಬರ್ ಜೊತೆಯಲ್ಲಿ ಕಾರ್ಯ ನಿರ್ವಹಿಸಿದ್ದ ಜವಾಬ್ದಾರಿಯುತ ಪತ್ರಕರ್ತರು ಅವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವಾಗ ಅವರು ಹುದ್ದೆಯಲ್ಲಿ ಮುಂದುವರಿಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಈ ವಿಷಯದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರ ಮೌನವನ್ನೂ ರೆಡ್ಡಿ ಪ್ರಶ್ನಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News