ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿ ನಿಲ್ಲಿಸಲು ಸಾಧ್ಯವಿಲ್ಲ: ಸಚಿವ ಝಮೀರ್ ಅಹ್ಮದ್

Update: 2018-10-10 14:46 GMT

ಮೈಸೂರು,ಅ.10: ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಸಂಸದ ಪ್ರತಾಪ್ ಸಿಂಹಗೆ ಮಾಡಲು ಕೆಲಸವಿಲ್ಲ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಬಿ.ಝಡ್.ಝಮೀರ್ ಅಹ್ಮದ್ ಹೇಳಿದರು.

ಭಾರತ್ ಸ್ಕೌಟ್ಸ್ ಮೈದಾನದಲ್ಲಿ 408ನೇ ದಸರಾ ಮಹೋತ್ಸವದ ಹಿನ್ನಲೆಯಲ್ಲಿ ಬುಧವಾರ ಏರ್ಪಡಿಸಿದ್ದ ಆಹಾರ ಮೇಳ ಉದ್ಘಾಟಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಂಸದ ಪ್ರತಾಪ್ ಸಿಂಹಗೆ ಕೆಲಸವಿಲ್ಲ. ಹಾಗಾಗಿ ಇಂತಹ ಮಾತುಗಳನ್ನು ಆಡುತ್ತಾರೆ. ಟಿಪ್ಪು ಜಯಂತಿ ನಿಲ್ಲಿಸಲು ಸಾಧ್ಯವಿಲ್ಲ. ಕಳೆದ ಮೂರು ವರ್ಷಗಳಿಂದ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಯಾವುದೇ ಕಾರಣಕ್ಕೂ ನಿಲ್ಲಿಸಲು ಸಾಧ್ಯವಿಲ್ಲ. ಚುನಾವಣೆ ಹತ್ತಿರ ಬರುತ್ತಿರುವುದರಿಂದ ಪ್ರತಾಪ್ ಸಿಂಹ ರಾಜಕೀಯಕ್ಕಾಗಿ ಇಂತಹ ಮಾತುಗಳನ್ನು ಆಡುತ್ತಿದ್ದಾರೆ ಎಂದ ಅವರು, ಮುಸ್ಲಿಮರನ್ನು ವಿರೋಧಿಸಿದರೆ ಬೇರೆ ಮತಗಳು ಒಂದಾಗಲಿವೆ ಎಂಬ ಭ್ರಮೆ ಅವರಲ್ಲಿದೆ. ಚುನಾವಣೆಯಲ್ಲಿ ಜನ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News