ಕಡಬ: ನೇಣು ಬಿಗಿದು ರೈತ ಆತ್ಮಹತ್ಯೆ
Update: 2018-10-10 14:53 GMT
ಕಡಬ, ಅ.10. ಸಾಲ ಬಾಧೆಯಿಂದ ಬೇಸತ್ತಿದ್ದರು ಎನ್ನಲಾದ ರೈತರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯಿಲದಲ್ಲಿ ಬುಧವಾರ ನಡೆದಿದೆ.
ಕೊಯಿಲ ಗ್ರಾಮದ ಕುಶಾಲಪ್ಪ ಗೌಡ (53) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.
ಬ್ಯಾಂಕ್ ಹಾಗೂ ಕೈ ಸಾಲಗಳಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಅವರು ಈ ಬಗ್ಗೆ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರು ಪತ್ನಿ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದು, ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.