ಅರ್ಹತೆಯುಳ್ಳವರಿಗೆ ಸಚಿವ ಸ್ಥಾನ: ಆರ್.ವಿ.ದೇಶಪಾಂಡೆ

Update: 2018-10-10 15:10 GMT

ಹುಬ್ಬಳ್ಳಿ, ಅ. 10: ಸಚಿವ ಸಂಪುಟ ವಿಸ್ತರಣೆ ಆದಷ್ಟು ಶೀಘ್ರವೇ ಆಗಲಿದ್ದು, ಅರ್ಹತೆಯುಳ್ಳವರಿಗೆ ಸಚಿವ ಸ್ಥಾನ ಸಿಗಬೇಕೆನ್ನುವುದು ನನ್ನ ಅಪೇಕ್ಷೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

ಬುಧವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅರ್ಹತೆ ಇದ್ದರೂ ಸಚಿವ ಸ್ಥಾನ ಕೈತಪ್ಪಿದ ಶಾಸಕರಲ್ಲಿ ಅಸಮಾಧಾನ ಸಹಜ. ಆದರೆ, ಯಾವುದೇ ಶಾಸಕರಿಗೆ ಅಸಮಾಧಾನ ಆಗದಂತೆ ಪಕ್ಷದ ವರಿಷ್ಟರ ತೀರ್ಮಾನದಂತೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದರು.

ಪಿಂಚಣಿ ಬಾಕಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಸರಕಾರ 130 ಕೋಟಿ ರೂ.ಪಿಂಚಣಿ ಬಾಕಿ ಸಂಬಂಧ ಚರ್ಚೆ ಮಾಡಿದ್ದು, ಈ ಸಂಬಂಧ ಶೀಘ್ರದಲ್ಲೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ದೇಶಪಾಂಡೆ ಇದೇ ಸಂದರ್ಭದಲ್ಲಿ ಸ್ಪಷ್ಟಣೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News