ದಸರಾದಿಂದ ದೂರ ಉಳಿದ ಕಾಂಗ್ರೆಸ್ ಸಂಸದ, ಶಾಸಕ ಜನಪ್ರತಿನಿಧಿಗಳು

Update: 2018-10-10 15:43 GMT
ಸಾಂದರ್ಭಿಕ ಚಿತ್ರ

ಮೈಸೂರು,ಅ.10: ಜಿಲ್ಲೆಯ ಕಾಂಗ್ರೆಸ್ ಶಾಸಕರು, ಸಂಸದರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳದೆ ದೂರ ಉಳಿದ ಘಟನೆ ನಡೆಯಿತು.

ದಸರಾ ಉದ್ಘಾಟನೆ ವೇಳೆ ಕಾಂಗ್ರೆಸ್ ಪಕ್ಷದ ಸಚಿವರಾದ ಜಯಮಾಲ ಮತ್ತು ರಾಜಶೇಖರ ಪಾಟೀಲ್ ಬಿಟ್ಟರೆ ಜಿಲ್ಲೆಯ ಸಂಸದ ಆರ್.ಧ್ರುವನಾರಾಯಣ, ಶಾಸಕರಾದ ತನ್ವೀರ್ ಸೇಠ್, ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು ಗೈರು ಎದ್ದು ಕಾಣುತಿತ್ತು. ಇನ್ನು ಅವಿಭಾಜ್ಯ ಜಿಲ್ಲೆ ಚಾಮರಾಜನಗರದ ಸಚಿವರಾದ ಸಿ.ಪುಟ್ಟರಂಗ ಶೆಟ್ಟಿ, ಎನ್.ಮಹೇಶ್, ಶಾಸಕ ಆರ್.ನರೇಂದ್ರ ಸೇರಿದಂತೆ ಜನಪ್ರತಿನಿಧಿಗಳು ಭಾಗವಹಿಸಿರಲಿಲ್ಲ.

ದಸರಾ ಮಹೋತ್ಸವ ಪ್ರಾರಂಭವಾದಾಗಿನಿಂದಲೂ ಕಾಂಗ್ರೆಸ್ ಪಕ್ಷದ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂಬು ಕೂಗು ಕಾಂಗ್ರೆಸ್ ವಲಯದಲ್ಲಿ ಕೇಳಿ ಬಂದಿತ್ತು. ಈ ಬಗ್ಗೆ ಸಚಿವ ಸಿ.ಪುಟ್ಟರಂಗ ಶೆಟ್ಟಿ, ಶಾಸಕ ತನ್ವೀರ್ ಸೇಠ್ ಸಹ ಬಹಿರಂಗವಾಗಿಯೇ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು. 

ಕಾಂಗ್ರೆಸ್ ಪಕ್ಷದ ನಾಯಕರನ್ನು ಕಡೆಗಣಿಸಲಾಗುತ್ತಿದೆ, ಹಾಗಾಗಿ ದಸರಾ ಮಹೋತ್ಸವದಲ್ಲಿ ಯಾವೊಬ್ಬ ಕಾಂಗ್ರೆಸ್ ಪಕ್ಷದ ಶಾಸಕರು ಸಚಿವರು ಪಾಲ್ಗೊಳ್ಳದಂತೆ ಮನವಿ ಮಾಡಿರುವುದಾಗಿ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ತಿಳಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News