ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತನ ಮೇಲೆ ಹಲ್ಲೆ

Update: 2018-10-10 17:04 GMT

ಬೆಂಗಳೂರು, ಅ.10: ಕ್ಷುಲ್ಲಕ ವಿಚಾರವಾಗಿ ಸ್ನೇಹಿತನ ಜೊತೆ ಜಗಳವಾಡಿ ಹಲ್ಲೆ ನಡೆಸಿರುವ ಘಟನೆ ಕಲಾಸಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸಿದ್ದಯ್ಯ ರಸ್ತೆಯ ವಿನೋಬಾ ನಗರದಲ್ಲಿ ಮಂಗಳವಾರ ರಾತ್ರಿ 7:30ರ ಸಮಯದಲ್ಲಿ ಬೋಸ್ ಮತ್ತು ಚಿಂಟು ಎಂಬ ಸ್ನೇಹಿತರ ನಡುವೆ ಕ್ಷುಲ್ಲಕ ವಿಚಾರವಾಗಿ ಜಗಳ ನಡೆದಿದೆ ಎನ್ನಲಾಗಿದೆ.

ಈ ವೇಳೆ ಬೋಸ್, ಮರದ ರಿಪೀಸ್‌ನಿಂದ ಸ್ನೇಹಿತ ಚಿಂಟುಗೆ ಹಲ್ಲೆ ನಡೆಸಿದ್ದರಿಂದ ಭುಜಕ್ಕೆ ಪೆಟ್ಟಾಗಿದೆ. ಈ ಸಂಬಂಧ ಕಲಾಸಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News