ದಸರಾ ಕುಸ್ತಿ ಪಂದ್ಯಾವಳಿ, ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಸಿಎಂ
Update: 2018-10-10 17:05 GMT
ಮೈಸೂರು,ಅ.10: ಮೈಸೂರು ದಸರಾ ಮಹೋತ್ಸವದ ಭಾಗವಾಗಿ ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ 'ದಸರಾ ಕುಸ್ತಿ ಪಂದ್ಯಾವಳಿ' ಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಸೇರಿದಂತೆ ಹಲವು ಮುಖಂಡರು ಮುಖ್ಯಮಂತ್ರಿಗಳ ಜೊತೆಯಲ್ಲಿದ್ದರು.
ನಂತರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಏಷ್ಯನ್ ಗೇಮ್ಸ್ 2018ರ ಚಿನ್ನದ ಪದಕ ವಿಜೇತ ಅಥ್ಲೀಟ್ ಎಂ.ಆರ್.ಪೂವಮ್ಮ ಅವರೊಂದಿಗೆ ದೀಪ ಬೆಳಗಿಸಿ 'ಸಿಎಂ ಕಪ್ 2018' ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.