ಸಚಿವ ಖಾದರ್ ಅಧ್ಯಕ್ಷತೆಯಲ್ಲಿ ರಾಜೀವ್‌ ಗಾಂಧಿ ಗ್ರಾಮೀಣ ವಸತಿ ನಿಗಮದ ಪುನರ್ ರಚನೆ

Update: 2018-10-11 15:33 GMT

ಬೆಂಗಳೂರು, ಅ.11: ವಸತಿ ಸಚಿವ ಯು.ಟಿ.ಖಾದರ್ ಅಧ್ಯಕ್ಷತೆಯಲ್ಲಿ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ಆಡಳಿತ ಮಂಡಳಿಯನ್ನು ಪುನರ್ ರಚಿಸಿ ಆದೇಶ ಹೊರಡಿಸಲಾಗಿದೆ.

ಆಡಳಿತ ಮಂಡಳಿಯ ನಿರ್ದೇಶಕರು: ವಸತಿ ಇಲಾಖೆ ನಿರ್ದೇಶಕ ಡಾ.ಜೆ. ರವಿಶಂಕರ್, ಆರ್ಥಿಕ ಇಲಾಖೆಯ ಕಾರ್ಯದರ್ಶಿ ಡಾ.ಏಕರೂಪ ಕೌರ್, ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್, ಕರ್ನಾಟಕ ಗೃಹ ಮಂಡಳಿಯ ಆಯುಕ್ತರು, ಪೌರಾಡತ ನಿರ್ದೇಶನಾಲಯದ ನಿರ್ದೇಶಕರು, ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತರು, ಸಿಎಂ ಆಪ್ತ ಕಾರ್ಯದರ್ಶಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಆಯುಕ್ತ, ಹುಡ್ಕೋ ಸಂಸ್ಥೆಯ ಉಪ ಪ್ರಧಾನ ವ್ಯವಸ್ಥಾಪಕ ಹಾಗೂ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರನ್ನು ನೇಮಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News