ತುಳು ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

Update: 2018-10-11 15:34 GMT

ಪುತ್ತೂರು, ಅ. 11: ಇಲ್ಲಿನ ಸುದಾನ ಶಾಲೆಯ ವಠಾರದಲ್ಲಿ ನ. 3ರಂದು ನಡೆಯಲಿರುವ ಪುತ್ತೂರು ತಾಲೂಕು ತುಳು ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಗುರವಾರ ಪುತ್ತೂರಿನ ಬಂಟರ ಭವನದಲ್ಲಿ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ ಮತ್ತು ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷ ಸವಣೂರು ಸೀತಾರಾಮ ರೈ ಬಿಡುಗಡೆಗೊಳಿಸಿದರು.

ಸಮ್ಮೇಳನ ಸ್ವಾಗತ ಸಮಿತಿಯ ಉಪಾಧ್ಯಕ್ಷರಾದ ರೆ.ವಿಜಯ ಹಾರ್ವಿನ್, ಕೋಶಾಧಿಕಾರಿ ರಾಮಣ್ಣ ಗೌಡ ಗುಂಡೋಳೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಜನಾರ್ದನ್, ತುಳು ಅಕಾಡೆಮಿ ಸದಸ್ಯ ಗೋಪಾಲ ಅಂಚನ್ ಉಪಸ್ಥಿತರಿದ್ದರು.

ಶಾಂತಾ ಕುಂಟಿನಿ ಪ್ರಾರ್ಥಿಸಿದರು. ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿರಂಜನ ರೈ ಮಠಂತಬೆಟ್ಟು,  ಕುಂಬ್ರ ದುರ್ಗಾಪ್ರಸಾದ ರೈ ಮತ್ತಿರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News