ಕ್ಯಾಂಟರ್ ಢಿಕ್ಕಿ: ಬೈಕ್ ಸವಾರ ಮೃತ್ಯು
Update: 2018-10-11 18:15 GMT
ಕೆ.ಆರ್.ಪೇಟೆ, ಅ.11: ಗೂಡ್ಸ್ ಕ್ಯಾಂಟರ್ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಕುಪ್ಪಹಳ್ಳಿ-ಹೇಮಗಿರಿ ಕ್ರಾಸ್ ಬಳಿ ಗುರುವಾರ ಬೆಳಗ್ಗೆ ನಡೆದಿದೆ.
ಕೋರಮಂಡಲ್ ಸಕ್ಕರೆ ಕಾರ್ಖಾನೆಯಲ್ಲಿ ನೌಕರನಾಗಿರುವ ತಾಲೂಕಿನ ವಡ್ಡರಹಳ್ಳಿ ಗ್ರಾಮದ ಮಂಜುನಾಥ್ ಅವರ ಮಗ ವಿಶ್ವನಾಥ(19) ಅಪಘಾತದಲ್ಲಿ ಸಾವನ್ನಪ್ಪಿದ ಯುವಕ.
ವಿಶ್ವನಾಥ್ ಬೆಳಗ್ಗೆ ಬಂಡಿಹೊಳೆ ಗ್ರಾಮದಲ್ಲಿನ ಕಾವೇರಿ ಗ್ರಾಮೀಣ ಬ್ಯಾಂಕ್ನಲ್ಲಿ ವ್ಯವಹಾರವನ್ನು ಮುಗಿಸಿಕೊಂಡು ಬೈಕ್ನಲ್ಲಿ ಬರುವಾಗ ಕುಪ್ಪಹಳ್ಳಿ ಕ್ರಾಸ್ನಲ್ಲಿ ಎದುರಿನಿಂದ ವೇಗವಾಗಿ ಬಂದ ಗೂಡ್ಸ್ ಕ್ಯಾಂಟರ್ ಢಿಕ್ಕಿಯಾಗಿ ಘಟನೆ ಸಂಭವಿಸಿದೆ.
ಸರ್ಕಲ್ ಇನ್ಸ್ಪೆಕ್ಟರ್ ವೆಂಕಟೇಶಯ್ಯ, ಗ್ರಾಮಾಂತರ ಪೋಲಿಸ್ ಠಾಣೆಯ ಸಬ್ಇನ್ಸ್ ಪೆಕ್ಟರ್ ಆನಂದ್ ಗೌಡ ಸ್ಥಳಕ್ಕೆ ಭೇಟಿ ಪರಿಶೀಲನೆ ಪರಿಶೀಲನೆ ನಡೆಸಿದರು. ಕ್ಯಾಂಟರ್ ಚಾಲಕ ಬೋರೇಗೌಡ ಪೋಲಿಸರಿಗೆ ಶರಣಾಗಿದ್ದಾನೆ.