ಲೋಕಸಭಾ ಉಪಚುನಾವಣೆ: ಬಳ್ಳಾರಿ ಕಾಂಗ್ರೆಸ್ ನಾಯಕರ ಸಭೆ
Update: 2018-10-12 06:49 GMT
ಬೆಂಗಳೂರು, ಅ.12: ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಇಂದು ಬಳ್ಳಾರಿ ಜಿಲ್ಲಾ ನಾಯಕರ ಸಭೆ ಕರೆಯಲಾಗಿತ್ತು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಲ ಸಂಪನ್ಮೂಲ, ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್, ಶಾಸಕರಾದ ಆನಂದ್ ಸಿಂಗ್, ತುಕರಾಂ, ಗಣೇಶ್, ಭೀಮಾ ನಾಯ್ಕ್, ಪರಮೇಶ್ವರ ನಾಯಕ್, ನಾಗೇಂದ್ರ ಉಪಸ್ಥಿತರಿದ್ದರು.