ಬೆಂಗಳೂರು: ಹೆಣ್ಣು ಮಗು ಎಂಬ ಕಾರಣಕ್ಕೆ ಹಸುಗೂಸನ್ನು ಕೊಂದ ತಂದೆ

Update: 2018-10-12 12:25 GMT

ಬೆಂಗಳೂರು, ಅ.12: ಹೆಣ್ಣು ಮಗು ಜನಿಸಿದ ಕಾರಣಕ್ಕಾಗಿ ವ್ಯಕ್ತಿಯೊಬ್ಬ ತನ್ನ ಪುತ್ರಿಯನ್ನೇ ಕೊಲೆಗೈದಿರುವ ದುರ್ಘಟನೆ ಇಲ್ಲಿನ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.

ನಗರದ ಸುಬ್ಬನಪಾಳ್ಯದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಈಜು ಕೊಳದ ನಿರ್ವಹಣೆ ಮಾಡುತ್ತಿದ್ದ ಗೋಕುಲ್ ಎಂಬಾತ ಈ ಕೃತ್ಯವೆಸಗಿರುವುದಾಗಿ ತಿಳಿದುಬಂದಿದೆ.

ನೇಪಾಳ ಮೂಲದ ಗೋಕುಲ್ ಪತ್ನಿಯೊಂದಿಗೆ ಬೆಂಗಳೂರಿಗೆ ಬಂದು ನೆಲೆಸಿದ್ದ. ಈ ದಂಪತಿಗೆ ಒಂದು ತಿಂಗಳ ಹಿಂದೆ ಹೆಣ್ಣು ಜನಿಸಿತ್ತು. ಇದರಿಂದ ಕೋಪಗೊಂಡು ಪುತ್ರಿಯನ್ನೇ ಕೊಲೆ ಮಾಡಿರುವುದಾಗಿ ಪತ್ನಿ ನೀಡಿರುವ ಪೊಲೀಸ್ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಬಾಣಸವಾಡಿ ಠಾಣ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News