ಪತ್ರಕರ್ತರ ಕೊಠಡಿ ಬದಲಾವಣೆ ಇಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟಣೆ

Update: 2018-10-12 14:54 GMT

ಬೆಂಗಳೂರು, ಅ. 12: ವಿಧಾನಸೌಧದ ಮೂರನೇ ಮಹಡಿಯಲ್ಲಿ ಪತ್ರಕರ್ತರಿಗೆ ಒದಗಿಸಲಾಗಿರುವ ಪತ್ರಿಕಾ ಕೊಠಡಿ ಸಂಖ್ಯೆ-333ನ್ನು ಮುಂದುವರಿಸುವಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಅವರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಶುಕ್ರವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಹಾಲಿ ಬಳಕೆಯಾಗುತ್ತಿರುವ ಪತ್ರಿಕಾ ಕೊಠಡಿ ಸಂಖ್ಯೆ-333ರ ಜೊತೆಗೆ ನೆಲ ಮಹಡಿ ಕೊಠಡಿ ಸಂಖ್ಯೆ-9ನ್ನು ಒದಗಿಸಲು ನಿರ್ಧರಿಸಲಾಗಿತ್ತು. ಆದರೆ, ಇದಕ್ಕೆ ಮಾಧ್ಯಮ ಪ್ರತಿನಿಧಿಗಳಿಂದ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಸ್ಪಷ್ಟಣೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News