ಅ.16ರಂದು ಡಾ.ವಿಷ್ಣುವರ್ಧನ್ ಕಲಾ ದತ್ತಿ ಪ್ರಶಸ್ತಿ ಪ್ರದಾನ

Update: 2018-10-12 15:29 GMT

ಬೆಂಗಳೂರು, ಅ.12: ಡಾ.ವಿಷ್ಣುವರ್ಧನ್ ಕಲಾ ದತ್ತಿ ಪ್ರಶಸ್ತಿಗೆ ಹಿರಿಯ ಕಲಾವಿದ ರಮೇಶ್‌ಭಟ್ ಆಯ್ಕೆಯಾಗಿದ್ದು, ಅ.16ರಂದು ಬೆಳಗ್ಗೆ 5.30ಕ್ಕೆ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ಈ ವೇಳೆ ಪರಿಷತ್‌ನ ಅಧ್ಯಕ್ಷ ಮನು ಬಳಿಗಾರ್ ಸೇರಿದಂತೆ ಹಿರಿಯ ಸಾಹಿತಿಗಳು ಕಲಾವಿದರು ಭಾಗವಹಿಸಲಿದ್ದಾರೆಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News