ಶ್ಯಾಮ್ ಭಟ್ ವಿರುದ್ಧ ಎಸಿಬಿಗೆ ದೂರು

Update: 2018-10-12 16:16 GMT
ಶ್ಯಾಮ್ ಭಟ್

ಬೆಂಗಳೂರು, ಸೆ.12: ಈ ಹಿಂದೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ಶ್ಯಾಮ್ ಭಟ್ ವಿರುದ್ಧ ತನಿಖೆಗೆ ಒತ್ತಾಯಿಸಿ ಎಸಿಬಿಗೆ ಜೆಡಿಎಸ್ ದೂರು ನೀಡಿದೆ.

ಶುಕ್ರವಾರ ನಗರದ ರೇಸ್‌ಕೋರ್ಸ್ ರಸ್ತೆಯ ಎಸಿಬಿ ಪ್ರಧಾನ ಕಚೇರಿಗೆ ದೂರು ಸಲ್ಲಿಸಿರುವ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೊ.ಸಿ.ಎಸ್.ಸಿದ್ದರಾಜು, ಸಾರ್ವಜನಿಕರು ಹಾಗೂ ರೈತರಿಗೆ ನಿವೇಶನ ವಿತರಣೆ ಮಾಡುವ ಸಂದರ್ಭದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ.

ಒಂದು ನಿವೇಶನಕ್ಕೆ 1.50 ಲಕ್ಷದಿಂದ 2 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾರೆ. ಹೀಗೆ, ಸುಮಾರು 100 ನಿವೇಶನ ಗಳಿಗೆ ಸುಮಾರು 2 ಕೋಟಿ ರೂ ಲಂಚ ಆಪೇಕ್ಷಿಸಿದ್ದರು ಎಂದು ಆರೋಪಿಸಿ ವಿಡಿಯೊ ಸಿಡಿಯೊಂದನ್ನು ಎಸಿಬಿ ಅಧಿಕಾರಿಗಳಿಗೆ ತಲುಪಿಸಿದ್ದಾರೆ.

ಸದಸ್ಯ ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ಯಾಮ್ ಭಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News