ಹನೂರು: ಖೋಖೋ ಪಂದ್ಯಾವಳಿಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Update: 2018-10-12 18:00 GMT

ಹನೂರು,ಅ.12: ಇತ್ತೀಚಿಗೆ ಮಂಡ್ಯ ಜಿಲ್ಲೆಯ ಕೊಕ್ಕರೆ ಬೆಳ್ಳೂರಿನಲ್ಲಿ ನಡೆದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ವಿಭಾಗ ಮಟ್ಟದ ಕ್ರೀಡಾಕೂಟದ ಖೋಖೋ ಪಂದ್ಯಾವಳಿಯಲ್ಲಿ ಹನೂರು ಕ್ಷೇತ್ರ ವ್ಯಾಪ್ತಿಯ ತೆಳ್ಳನೂರು ಶಾಲೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು, ರಾಜ್ಯ ಮಟ್ಟಕ್ಕೆ ಶಾಲೆಯಿಂದ ಪ್ರತೀಕ್ಷ, ರಮ್ಯ, ಎಸ್.ಮಧು, ಸಿಂದು ಎಂಬ ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.

ಈ ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಎಸ್‍ಡಿಎಂಸಿ ಸಮಿತಿ ಅಧ್ಯಕ್ಷ ಸಣ್ಣಪ್ಪ, ಮುಖ್ಯ ಶಿಕ್ಷಕ ಎ ರಾಗಿಣಿ, ದೈಹಿಕ ಶಿಕ್ಷಕ ಎಸ್ ಕುಮಾರ್ ನಾಯ್ಕ ಮತ್ತು ಶಿಕ್ಷಕ ಮುತ್ತುರಾಜ್, ಶಾಲೆ ಶಿಕ್ಷಕವೃಂದ ಹಾಗೂ ತೆಳ್ಳನೂರು ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News