ಬೆಂಗಳೂರಿಗೆ ಆಗಮಿಸಿದ ರಾಹುಲ್: ಬರಮಾಡಿಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ
Update: 2018-10-13 09:13 GMT
ಬೆಂಗಳೂರು, ಅ. 13: ರಫೇಲ್ ವಿವಾದ ಕುರಿತಾದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ಬೆಂಗಳೂರಿಗೆ ಆಗಮಿಸಿದರು.
ರಾಹುಲ್ ಗಾಂಧಿ ಅವರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬರಮಾಡಿಕೊಂಡರು. ಈ ಸಂದರ್ಭ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.