ಮಂಗಳೂರು: ಶಕ್ತಿ ವಸತಿ ಶಾಲೆಯಲ್ಲಿ ಕಾವಿ ಕಲೆಯ ತರಬೇತಿ

Update: 2018-10-13 09:09 GMT

ಮಂಗಳೂರು, ಅ.11: ಶಕ್ತಿನಗರದ ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ದಸರಾ ರಜಾ ಶಿಬಿರವು ‘ಶಕ್ತಿ ಕ್ಯಾನ್ ಕ್ರಿಯೇಟ್’ನಲ್ಲಿ ಶಿಬಿರಾರ್ಥಿಗಳಿಗೆ ಕಾವಿ ಕಲೆಯ ತರಬೇತಿ ನೀಡಲಾಯಿತು.

ತರಬೇತಿ ಕಾರ್ಯಕ್ರಮದಲ್ಲಿ ನಾಡಿನ ಪ್ರಸಿದ್ಧ ಕಲಾವಿದೆ ವೀಣಾ ಶ್ರೀನಿವಾಸ್ ಶಿಬಿರಾರ್ಥಿಗಳಿಗೆ ಕಾವಿ ಕಲೆಯ ತರಬೇತಿಯನ್ನು ನೀಡಿದರು. 

ಮುಖ್ಯ ಸಲಹೆಗಾರ ರಮೇಶ್ ಕೆ. ಹಾಗೂ ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ನಸೀಮಾ ಬಾನು ಉಪಸ್ಥಿತರಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್ ಕಲಾವಿದರನ್ನು ಪರಿಚಯಿಸಿ, ಸ್ವಾಗತಿಸಿದರು.

ಶಕ್ತಿ ಪಿ.ಯು. ಕಾಲೇಜಿನ ಪ್ರಾಚಾರ್ಯ ಪ್ರಭಾಕರ ಜಿ.ಎಸ್ ವಂದಿಸಿದರು. ಭಾಗವಹಿಸಿದ ವಿದ್ಯಾರ್ಥಿಗಳೆಲ್ಲರೂ ಚಿತ್ರ ಬಿಡಿಸಿ ಸಂಭ್ರಮಪಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News