ಅ.14: ದಸರಾ ರಜಾ ಶಿಬಿರ ‘ಶಕ್ತಿ ಕ್ಯಾನ್ ಕ್ರಿಯೇಟ್’ನ ಸಮಾರೋಪ

Update: 2018-10-13 12:29 GMT

ಮಂಗಳೂರು, ಅ.13: ಶಕ್ತಿನಗರದ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜು ವತಿಯಿಂದ ಅ.9ರಿಂದ ಪ್ರಾರಂಭವಾಗಿರುವ 6 ದಿನಗಳ ದಸರಾ ರಜಾ ಶಿಬಿರ ‘ಶಕ್ತಿ ಕ್ಯಾನ್ ಕ್ರಿಯೇಟ್’ನ ಸಮಾರೋಪ ಸಮಾರಂಭವು ಅ.14ರಂದು 2:30ಕ್ಕೆ ಶಕ್ತಿ ವಸತಿ ಶಾಲೆಯ ಮೈದಾನದಲ್ಲಿ ನಡೆಯಲಿದೆ.

ಸಮಾರೋಪ ಸಮಾರಂಭದ ಮುಖ್ಯಅತಿಥಿಗಳಾಗಿ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್, ಸಂಸದ ನಳೀನ್‌ಕುಮಾರ್ ಕಟೀಲು, ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಆಗಮಿಸಲಿದ್ದಾರೆ.

ಸಮಾರೋಪದ ಅಧ್ಯಕ್ಷತೆಯನ್ನು ಶಕ್ತಿ ಎಜುಕೇಶನ್ ಟ್ರಸ್ಟ್‌ನ ಟ್ರಸ್ಟಿ ಸಗುಣ ಸಿ. ನಾಕ್ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ. ನಾಕ್, ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್, ಪ್ರಧಾನ ಸಲಹೆಗಾರ ರಮೇಶ ಕೆ., ಪ್ರಾಂಶುಪಾಲರಾದ ಪ್ರಭಾಕರ ಜಿ. ಎಸ್., ಅಭಿವೃದ್ಧಿ ಅಧಿಕಾರಿ ನಸೀಮಾಬಾನು ಮತ್ತಿತರರು ಭಾಗವಹಿಸಲಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ಮಕ್ಕಳು 6 ದಿನಗಳ ಶಿಬಿರದಲ್ಲಿ ಕಲಿತ ಅನೇಕ ವಿಷಯಗಳನ್ನು ವೇದಿಕೆಯಲ್ಲಿ ನೃತ್ಯ, ಹಾಡು ಹಾಗೂ ಕುಣಿತದ ಮೂಲಕ ವ್ಯಕ್ತಪಡಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News