ಬೆಂಗಳೂರು: ಚೂರಿಯಿಂದ ಇರಿದು ಕೊಲೆ

Update: 2018-10-13 13:59 GMT

ಬೆಂಗಳೂರು, ಅ.13: ಯುವಕನೊಬ್ಬನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಇಲ್ಲಿನ ಉಪ್ಪಾರ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೂಲತಃ ಕೇರಳದ ಗೌತಮ್ (20) ಕೊಲೆಯಾದ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ.

ಹಲಸೂರು ಗೇಟ್‌ನ ಸಿಂಡಿಕೇಟ್ ಬ್ಯಾಂಕ್ ಬಳಿ ಗೌತಮ್ ವಾಸವಾಗಿದ್ದು, ಚಿಕ್ಕಪೇಟೆಯಲ್ಲಿನ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದನು. ಶುಕ್ರವಾರ ಎಂದಿನಂತೆ ಕೆಲಸಕ್ಕೆ ತೆರಳಿದ್ದು, ತಡರಾತ್ರಿ ಕೆಲಸ ಮುಗಿಸಿಕೊಂಡು ಸ್ನೇಹಿತನೊಂದಿಗೆ ಜೊತೆ ನಡೆದುಕೊಂಡು ಬರುತ್ತಿದ್ದರು. ಮಾರ್ಗಮಧ್ಯೆ ಮೈಸೂರು ಬ್ಯಾಂಕ್ ವೃತ್ತದ ಬಳಿ ಇವರಿಬ್ಬರು ಸೆಲ್ಫೀ ತೆಗೆದುಕೊಳ್ಳುತ್ತಿದ್ದರು. ಈ ಸಂದರ್ಭದಲ್ಲಿ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಇಲ್ಲಿ ಏನು ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಈ ವೇಳೆ ಗೌತಮ್ ಹಾಗೂ ದುಷ್ಕರ್ಮಿಗಳ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಚಾಕುನಿಂದ ಗೌತಮ್ ಎದೆಗೆ ಚುಚ್ಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡ ಗೌತಮ್‌ನನ್ನು ಸ್ನೇಹಿತನೇ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಮೃತದೇಹವನ್ನು ಕ್ಟೋರಿಯಾ ಆಸ್ಪತ್ರೆಯಲ್ಲಿಡಲಾಗಿದೆ. ಉಪ್ಪಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳಿಗಾಗಿ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News