ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ: ಸತೀಶ್ ಜಾರಕಿಹೊಳಿ

Update: 2018-10-14 12:00 GMT

ಬೆಳಗಾವಿ, ಅ. 14: ಆಯ್ಕೆಯಾದ ಎಲ್ಲ ಎಪಿಎಂಸಿ ಸದಸ್ಯರು ಒಗ್ಗಟ್ಟಿನಿಂದ ಇದ್ದು, ನಮ್ಮಲ್ಲಿ ಪಕ್ಷ ಅಥವಾ ಗುಂಪು ಇಲ್ಲ. ಯಾವುದೇ ಭಿನ್ನಾಭಿಪ್ರಾಯವೂ ಇಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ರವಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಪಿಎಂಸಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಾಳೆ(ಅ.15) ನಡೆಯಲಿದ್ದು, ಅವಿರೋಧ ಆಯ್ಕೆಗೆ ಆದ್ಯತೆ ನೀಡಲಾಗುವುದು. ಮುಖಂಡರು, ಎಪಿಎಂಸಿ ಸದಸ್ಯರ ಸಭೆ ನಡೆಸಲಿದ್ದು, ಎಲ್ಲರ ಅಭಿಪ್ರಾಯ ಪಡೆದು, ಅಂತಿಮ ತಿರ್ಮಾನ ಕೈಗೊಳ್ಳುತ್ತೇವೆ ಎಂದರು.

ಅಭ್ಯರ್ಥಿ ಪರ ಕೆಲ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಿದರೂ, ಅವರ ಪರ ಕೆಲಸ ಮಾಡಲು ಸಿದ್ಧ. ಆದರೆ ನಾವು ಯಾವುದೇ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿಲ್ಲ ಎಂದು ಅವರು ಸ್ಪಷ್ಟಣೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News