ಎಸ್ಸೆಸ್ಸೆಫ್ ಬಂಟ್ವಾಳ ಡಿವಿಶನ್ ವತಿಯಿಂದ ಚುನಾವಣಾ ಕಾರ್ಯಾಗಾರ

Update: 2018-10-14 15:57 GMT

ಬಂಟ್ವಾಳ, ಅ.14: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ನ ಸದಸ್ಯತ್ವ ಅಭಿಯಾನವು ನ.1ರಿಂದ 15ರವರೆಗೆ ನಡೆಯಲಿದ್ದು, ಇದರ ಅಂಗವಾಗಿ ಬಂಟ್ವಾಳ ಡಿವಿಶನ್ ಎಸ್ಸೆಸ್ಸೆಫ್ ವತಿಯಿಂದ ಚುನಾವಣಾ ಕಾರ್ಯಾಗಾರವು ಕೊಳಕೆ ಸಮುದಾಯ ಭವನದಲ್ಲಿ ಇಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕೊಳಕೆ ಜುಮಾ ಮಸೀದಿ ಖತೀಬ್ ಬದ್ರುದ್ದೀನ್ ಅಹ್ಸನಿ ಉಸ್ತಾದ್ ನೆರವೇರಿಸಿದರು. ಎಸ್ಸೆಸ್ಸೆಫ್ ಬಂಟ್ವಾಳ ಡಿವಿಶನ್ ಅಧ್ಯಕ್ಷ ಅಬ್ದುಲ್ ರಶೀದ್ ಹಾಜಿ ವಗ್ಗ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಸದಸ್ಯತ್ವ ಅಭಿಯಾನದ ಬಗ್ಗೆ ಎಸ್ಸೆಸ್ಸೆಫ್ ರಾಜ್ಯ ಸಮಿತಿ ಹೊರಡಿಸಿದ್ದ ಸುತ್ತೋಲೆಯನ್ನು ಸೆಕ್ಟರ್ ಚುನಾವಣಾ ಅಧಿಕಾರಿಗಳಿಗೆ ಹಾಗೂ ಯುನಿಟ್ ಚುನಾವಣಾ ಅಧಿಕಾರಿಗಳಿಗೆ ವಿವರಿಸಿದರು.

ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಕಾರ್ಯದರ್ಶಿ ಶರೀಫ್ ನಂದಾವರ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಇಬ್ರಾಹಿಮ್ ಸಖಾಫಿ ಸೆರ್ಕಳ, ಬಂಟ್ವಾಳ  ಡಿವಿಶನ್ ಪ್ರಧಾನ ಕಾರ್ಯದರ್ಶಿ ಆಬಿದ್ ನಈಮಿ ಹಾಗೂ ಡಿವಿಷನ್, ಸೆಕ್ಟರ್ ಹಾಗೂ ಯುನಿಟ್ ಮಟ್ಟದ ಚುನಾವಣಾ ಅಧಿಕಾರಿಗಳು ಭಾಗವಹಿಸಿದ್ದರು. ಅಕ್ಬರ್ ಮದನಿ ಸ್ವಾಗತಿಸಿ, ಹಾರಿಸ್ ಪೆರಿಯಪಾದೆ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News