ವಾಜಪೇಯಿ ಕ್ರೀಡಾಂಗಣದಿಂದ ಯುವಜನತೆಗೆ ಯಶಸ್ಸು ಸಿಗಲಿ: ಆರ್.ಅಶೋಕ್

Update: 2018-10-14 17:31 GMT

ಬೆಂಗಳೂರು, ಅ.14: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ ಸ್ಥಾಪಿಸಲಾಗಿದ್ದು, ಯುವಜನತೆ ಇದನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಕ್ರೀಡಾಪಟುಗಳಾಗಿ ರೂಪಗೊಳ್ಳಲಿ ಎಂದು ಶಾಸಕ ಆರ್.ಅಶೋಕ್ ಆಶಿಸಿದರು.

ರವಿವಾರ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಸದ ಕ್ವಾರಿಯಾಗಿದ್ದ ಈ ಪ್ರದೇಶವನ್ನು ಕಲ್ಲಿನ ಪಾರ್ಕ್ ಹಾಗೂ ಅಂತರಾಷ್ಟ್ರೀಯ ಗುಣಮಟ್ಟದ ಬಾಸ್ಕೆಟ್ ಬಾಲ್ ಮತ್ತು ಸ್ಕೇಟಿಂಗ್ ಟ್ರಾಕ್ ಹೊಂದಿರುವ ಕ್ರೀಡಾಂಗಣವಾಗಿ ಪರಿವರ್ತಿಸಲಾಗಿದೆ ಎಂದು ಶ್ಲಾಘಿಸಿದರು.

ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಮಾತನಾಡಿ, ಈಗ ಕ್ರೀಡಾಂಗಣವಾಗಿರುವ ಜಾಗದಲ್ಲಿ ಕಸದ ರಾಶಿಯಿಂದ ತುಂಬಿ ಹೋಗಿತ್ತು. ಇದರಿಂದ ಸುತ್ತಮುತ್ತಲಿನ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿತ್ತು. ಇದನ್ನು ಗಮನಿಸಿದ ಬೊಮ್ಮನಹಳ್ಳಿ ವಾರ್ಡ್‌ನ ಕಾರ್ಪೊರೇಟರ್ ಮೋಹನ್‌ರಾಜು ಈ ಜಾಗವನ್ನು ಯುವಕರಿಗೆ ಸದುಪಯೋಗವಾಗುವಂತೆ ಕ್ರೀಡಾಂಗಣವಾಗಿ ಪರಿವರ್ತಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News