ಬೆಂಗಳೂರು : ಮೊಬೈಲ್, ನಗದು ದರೋಡೆಗೈದ ದುಷ್ಕರ್ಮಿಗಳ ತಂಡ

Update: 2018-10-14 17:54 GMT

ಬೆಂಗಳೂರು, ಅ.14:ಬೈಕ್‌ನಲ್ಲಿ ಮನೆಗೆ ಬರುತ್ತಿದ್ದ ಇಬ್ಬರು ಸಹೋದರರನ್ನು ಅಡ್ಡಗಟ್ಟಿದ ಮೂವರು ದುಷ್ಕರ್ಮಿಗಳ ತಂಡ, ಮೊಬೈಲ್, ನಗದು ದೋಚಿರುವ ಘಟನೆ ಇಲ್ಲಿನ ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಯಹಲಂಕ ಉಪನಗರದಲ್ಲಿನ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಇಬ್ಬರು ಸಹೋದರರು ಶನಿವಾರ ತರಗತಿ ಮುಗಿಸಿ ಬೈಕ್‌ನಲ್ಲಿ ಮನೆಗೆ ಬರುತ್ತಿದ್ದರು.
ಇಲ್ಲಿನ ನಾಗಾರ್ಜುನ ವಿದ್ಯಾನಿಕೇತನ ಶಾಲೆ ಬಳಿ ತಲುಪಿದಾಗ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಸಹೋದರರಿಬ್ಬರನ್ನು ಅಡ್ಡಗಟ್ಟಿ ಅವರಲ್ಲಿದ್ದ ಎರಡು ಮೊಬೈಲ್‌ಗಳನ್ನು ಕಸಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಯಲಹಂಕ ಉಪನಗರ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News