ವಿಮಾನದಿಂದ ಕೆಳಗೆ ಬಿದ್ದ ಗಗನಸಖಿಗೆ ಗಂಭೀರ ಗಾಯ

Update: 2018-10-15 05:12 GMT

ಮುಂಬೈ, ಅ.15: ಮುಂಬೈನ ಛತ್ರಪತಿ ಶಿವಾಜಿ ಅಂತರ್‌ರಾಷ್ಟ್ರೀಯ ವಿಮಾನನಿಲ್ದಾಣದಿಂದ ಹೊಸದಿಲ್ಲಿಗೆ ಹೊರಡಲು ತಯಾರಾಗಿದ್ದ ಏರ್ ಇಂಡಿಯಾ ವಿಮಾನದಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದ 53ರ ಹರೆಯದ ಗಗನಸಖಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಮುಂಬೈ-ದಿಲ್ಲಿ ರೂಟ್ ನಡುವೆ ಹಾರಾಡುತ್ತಿರುವ ಏರ್ ಇಂಡಿಯಾ ಫ್ಲೈಟ್ ಎಐ864ರಲ್ಲಿ ಈ ಘಟನೆ ನಡೆದಿದೆ ಎಂದು ವಿಮಾನಯಾನ ಮೂಲಗಳು ತಿಳಿಸಿವೆ.

ವಿಮಾನದ ಮಹಿಳಾ ಸಿಬ್ಬಂದಿ ಬಾಗಿಲನ್ನು ಹಿಂದಕ್ಕೆ ತಳ್ಳಿ ಮುಚ್ಚುತ್ತಿದ್ದ ಸಂದರ್ಭದಲ್ಲಿ ವಿಮಾನದಿಂದ ಕೆಳಗೆಬಿದ್ದಿದ್ದಾರೆ. ಅವರನ್ನು ಕೂಡಲೇ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಏರ್‌ಇಂಡಿಯಾ ವಕ್ತಾರ ಘಟನೆಯ ಬಗ್ಗೆ ತಕ್ಷಣದ ಪ್ರತಿಕ್ರಿಯೆ ನೀಡಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News