ಬಂಟ್ವಾಳ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ: ಪದಾಧಿಕಾರಿಗಳ ಆಯ್ಕೆ

Update: 2018-10-15 09:42 GMT

ಬಂಟ್ವಾಳ, ಅ. 15: ಬಂಟ್ವಾಳ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಅಧ್ಯಕ್ಷ ರಾಗಿ ಪದ್ಮನಾಭ ರೈ‌ ಹಾಗೂ ಉಪಾಧ್ಯಕ್ಷ ರಾಗಿ ಚಂದ್ರಶೇಖರ ಪೂಜಾರಿ ಅವರು ಎರಡನೆ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ಕೃಷಿ ಉತ್ಪನ್ನ ಮಾರುಕಟ್ಟೆ ಇದರ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ಮಧ್ಯಾಹ್ನ  ಚುನಾವಣೆ ನಡೆಯಿತು.

ಕಳೆದ ಬಾರಿ ಎಪಿಎಂಸಿ ಅಧ್ಯಕ್ಷರಾಗಿದ್ದ ರಮಾನಾಥ ರೈ ಅಪ್ತ ಪದ್ಮನಾಭ ರೈ ಅವರು ಈ ಬಾರಿಯೂ ಅಧ್ಯಕ್ಷ ಸ್ಥಾನಕ್ಕೆ, ಕಳೆದ ಬಾರಿ ಉಪಾಧ್ಯಕ್ಷರಾಗಿದ್ದ ಚಂದ್ರಶೇಖರ ಪೂಜಾರಿ ಅವರು ಈ‌ ಬಾರಿಯೂ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು.

ಬಿಜೆಪಿ ಬೆಂಬಲಿತ ಏಳು ಸದಸ್ಯರು ಹಾಗೂ ಕಾಂಗ್ರೆಸ್ ಬೆಂಬಲಿತ  ಆರು ಚುನಾಯಿತ ಸದಸ್ಯರು ಸೇರಿ ಒಟ್ಟು 13 ಸದಸ್ಯರಿದ್ದಾರೆ. ಬಿಜೆಪಿ ಬೆಂಬಲಿತ ಯಾವ ಸದಸ್ಯರು ಕೂಡ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ ಕಾರಣ ಕಳೆದ ಬಾರಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ರಾಗಿದ್ದ ಪದ್ಮನಾಭ ರೈ ಮತ್ತು ಚಂದ್ರಶೇಖರ ಪೂಜಾರಿ ಅವರು ಅವಿರೋಧವಾಗಿ ಆಯ್ಕೆಯಾದರು.

ತಹಶೀಲ್ದಾರ ಪುರಂದರ ಹೆಗ್ಡೆ ಅವರು ಚುನಾವಣಾ ಪ್ರಕ್ರಿಯೆ ನಡೆಸಿದರು. ಎಪಿಎಂಸಿ ಕಾರ್ಯದರ್ಶಿ ಭಾರತಿ, ಪ್ರಭಾರ ಉಪತಹಶೀಲ್ದಾರ ಸೀತರಾಮ,  ಚುನಾವಣಾ ಶಾಖೆಯ ನೌಕರ ರಾಜ್ ಕುಮಾರ್ ಚುನಾವಣಾ ಪ್ರಕ್ರಿಯೆ ನಿರ್ವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News