ಹಿರಿಯಡ್ಕ ಕಾಲೇಜಿನ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ

Update: 2018-10-15 13:52 GMT

ಹಿರಿಯಡ್ಕ, ಅ.15: ಹಿರಿಯಡ್ಕ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2018-19ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವು ಇತ್ತೀಚೆಗೆ ಮಡಿಬೆಟ್ಟು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು.

ಶಿಬಿರವನ್ನು ಕಾರ್ಕಳ ಶಾಸಕ ಮತ್ತು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ವಿ.ಸುನಿಲ್ ಕುಮಾರ್ ಉದ್ಘಾಟಿಸಿದರು. ಅಧ್ಯಕ್ಷತೆ ಯನ್ನು ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಭಟ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಡಿಬೆಟ್ಟು ಶಾಲಾ ಆಡಳಿತಾಧಿಕಾರಿ ನವೀನ್ ಚಂದ್ರ ಹೆಗ್ಡೆ, ಕಾರ್ಕಳ ತಾಪಂ ಅಧ್ಯಕ್ಷೆ ಮಾಲಿನಿ ಜೆ.ಶೆಟ್ಟಿ, ಜಿಪಂ ಸದಸ್ಯ ಸುಮಿತ್ ಶೆಟ್ಟಿ, ನೀರೆ ಗ್ರಾಪಂ ಅಧ್ಯಕ್ಷ ಸದಾನಂದ ಪ್ರಭು, ತಾಪಂ ಮಾಜಿ ಅಧ್ಯಕ್ಷ ವಿಕ್ರಮ್ ಹೆಗ್ಡೆ, ಹಿರಿಯಡ್ಕ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಅಮರನಾಥ ಶೆಟ್ಟಿ, ಉಪಪ್ರಾಂಶುಪಾಲೆ ಶಾರದ ಶುಭಹಾರೈಸಿದರು.

ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಶ್ರೀಪತಿ ಭಟ್ ಶುಭಶಂಸನೆಗೈದರು. ಎನ್ನೆಸ್ಸೆಸ್ ಘಟಕದ ಯೋಜನಾಧಿಕಾರಿ ಮಂಜುನಾಥ ಬಿ.ಡಿ., ಶಾಲೆಯ ಮುಖ್ಯೋಪಾಧ್ಯಾಯ ದಿನೇಶ್ ಯು.ಎಸ್., ಘಟಕದ ನಾಯಕ ಪ್ರಸನ್ನ ಭಟ್, ನಾಯಕಿ ಸೌಮ್ಯ ಉಪಸ್ಥಿತರಿದ್ದರು. ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ದೇವದಾಸ ಪ್ರಭು ವಂದಿಸಿದರು. ಕನ್ನಡ ಉಪನ್ಯಾಸಕಿ ನಳಿನಾದೇವಿ ಎಂ.ಆರ್. ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News