ಕಲ್ಲಿದ್ದಲು ಹಂಚಿಕೆ ಹಗರಣ: ನವೀನ್ ಜಿಂದಾಲ್‌ಗೆ ಜಾಮೀನು

Update: 2018-10-15 16:53 GMT

ಹೊಸದಿಲ್ಲಿ, ಅ. 15: ಜಾರ್ಖಂಡ್ ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆದಿರುವುದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಹಣ ವಂಚನೆಯ ಆರೋಪಕ್ಕೆ ಒಳಗಾಗಿರುವ ಉದ್ಯಮಿ ಹಾಗೂ ಕಾಂಗ್ರೆಸ್ ನಾಯಕ ನವೀನ್ ಜಿಂದಾಲ್‌ಗೆ ದಿಲ್ಲಿ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ.

 ವೈಯುಕ್ತಿಕ ಬಾಂಡ್ 1 ಲಕ್ಷ ರೂ. ಹಾಗೂ ಅದೇ ಮೊತ್ತದ ಶ್ಯೂರಿಟಿ ಆಧಾರದಲ್ಲಿ ವಿಶೇಷ ನ್ಯಾಯಾಧೀಶ ಭರತ್ ಪರಾಶರ್ ಅವರು ನವೀನ್ ಜಿಂದಾಲ್ ಅವರಿಗೆ ಜಾಮೀನು ನೀಡಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿ ಇತರ 14 ಮಂದಿಗೆ ಕೂಡ ನ್ಯಾಯಾಲಯ ಜಾಮೀನು ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News