ಸಿಎಂ ಮಾಧ್ಯಮ ಸಮನ್ವಯಾಧಿಕಾರಿಯಾಗಿ ಕೆ.ಸಿ.ಸದಾನಂದ ನೇಮಕ
Update: 2018-10-15 17:07 GMT
ಬೆಂಗಳೂರು, ಅ.15: ಪತ್ರಕರ್ತ ಕೆ.ಸಿ.ಸದಾನಂದ ಅವರನ್ನು ಸಿಎಂ ಮಾಧ್ಯಮ ಸಮನ್ವಯಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.
ಇತ್ತೀಚೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದಲ್ಲಿ ತೆಗೆದುಕೊಂಡ ನಿರ್ಣಯದಂತೆ ಸದಾನಂದ ಅವರನ್ನು ನೇಮಕ ಮಾಡಲಾಗಿದೆ.
2018ರ ಮೇ 25ರಿಂದ ಪೂರ್ವಾನ್ವಯ ಆಗುವಂತೆ ಕೆ.ಸಿ.ಸದಾನಂದ ಅವರನ್ನು ಸಿಎಂ ಮಾಧ್ಯಮ ಸಮನ್ವಯ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಮುಂಬೈನ ಕರ್ನಾಟಕ ಮಲ್ಲ ಪತ್ರಿಕೆಯಿಂದ ವೃತ್ತಿ ಜೀವನ ಆರಂಭಿಸಿದ ಸದಾನಂದ, ಸಂಜೆವಾಣಿ, ಕನ್ನಡಪ್ರಭ ಪತ್ರಿಕೆಯಲ್ಲಿ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ.