ಅ.26: ದುಬೈನಲ್ಲಿ ವಚನ ಸಾಹಿತ್ಯ ಸಮ್ಮೇಳನ
Update: 2018-10-15 17:16 GMT
ಬೆಂಗಳೂರು, ಅ. 15: ಅಂತರ್ ರಾಷ್ಟ್ರೀಯ ವಚನ ಸಾಹಿತ್ಯ ಸಮ್ಮೇಳನವನ್ನು ಅ.26ರಂದು ದುಬೈ ನಗರದ ಬಿಲ್ವ ಇಂಡಿಯನ್ ಶಾಲೆಯಲ್ಲಿ ಹಮ್ಮಿಕೊಂಡಿರುವುದಾಗಿ ರಾಷ್ಟ್ರೀಯ ಬಸವ ಪ್ರತಿಷ್ಠಾನ ತಿಳಿಸಿದೆ.
ಸೋಮವಾರ ನಗರದ ಪ್ರೆಸ್ಕ್ಲಬ್ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಸದಸ್ಯ ಲೋಕೇಶ್ವರ್ ಮಾತನಾಡಿ, ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಬಸವ ಮರುಳಸಿದ್ದ ಸ್ವಾಮೀಜಿ, ಡಾ.ಗುರುಬಸವ ಮಹಾಸ್ವಾಮಿ, ರಂಜಾನ್ ದರ್ಗಾ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಜಾತ್ಯತೀತ ಪರಿಕಲ್ಪನೆ ಹಾಗೂ ಲಿಂಗ ಸಮಾನತೆಯನ್ನು ಸಾರುವ ನಿಟ್ಟಿನಲ್ಲಿ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಅಕ್ಕ ಕಾಯಕರತ್ನ ಪ್ರಶಸ್ತಿಯನ್ನು ಖ್ಯಾತ ವಿಜ್ಞಾನಿ ಕಿರಣ್ ಕುಮಾರ್ ಹಾಗೂ ಸಮಾಜ ಸೇವಕಿ ಡಾ.ವೀಣಾ ಅಶೋಕ್, ಡಾ.ಜ್ಯೋತಿಯವರಿಗೆ ನೀಡಲಾಗುತ್ತಿದೆ ಎಂದು ಹೇಳಿದರು.