ಮಂಗಳೂರು: ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್ ನಿಂದ ವಿಶಿಷ್ಟವಾಗಿ ಯು.ಟಿ.ಖಾದರ್ ಹುಟ್ಟುಹಬ್ಬ ಆಚರಣೆ

Update: 2018-10-16 05:01 GMT

ಮಂಗಳೂರು, ಅ.16: ನಗರಾಭಿವೃಧ್ದಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ಅವರ ಹುಟ್ಟುಹಬ್ಬವನ್ನು ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಮಂಗಳೂರು ವಿಧಾನ ಸಭಾ ಕ್ಷೇತ್ರವು ಅರ್ಹ ಫಲಾನುಭವಿಗಳಿಗೆ ಮೀನು ವ್ಯಾಪಾರಕ್ಕಾಗಿ ಮೂರು ಸೈಕಲ್ ಹಾಗೂ ಎರಡು ಹೊಲಿಗೆ ಯಂತ್ರವನ್ನು ವಿತರಿಸುವ ಮೂಲಕ ಅರ್ಥವತ್ತಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಮಮತಾ ಡಿ.ಎಸ್.ಗಟ್ಟಿ, ಮಂಗಳೂರು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ರವೂಫ್ ಸಿ.ಎಂ., ದ.ಕ. ಜಿಪಂ ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷೆ ಅನಿತಾ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಾಹುಲ್ ಹಮೀದ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮುಸ್ತಫ ಹರೇಕಳ, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಆಲ್ವಿನ್ ಕೋಟೆಕಾರು, ಪಾವೂರು ಗ್ರಾಮ ಪಂಚಾಯತ್ ಅಧ್ಯಕ್ಷ ಫಿರೋಝ್ ಮಲಾರ್, ಯುವ ಕಾಂಗ್ರೆಸ್ ಕಾರ್ಯದರ್ಶಿ ಸಂಪತ್ ಮದ್ಯಾರು ಮುಂತಾದವರು ಉಪಸ್ಥಿತರಿದ್ದರು.

ಮಂಗಳೂರು ವಿಧಾನ ಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿ ನಿಸಾರ್ ಮಲಾರ್ ಸ್ವಾಗತಿಸಿದರು. ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಅಧ್ಯಕ್ಷ ರಿಯಾಝ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News