ಜಯಸೂರ್ಯ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಐಸಿಸಿ

Update: 2018-10-16 05:28 GMT

ಕೊಲಂಬೊ, ಅ.15: ಅಂತರ್‌ರಾಷ್ಟ್ರೀಯ ಕ್ರಿಕೆಟ್ ಕೌನಿಲ್ಸ್‌ನಭ್ರಷ್ಟಾಚಾರ ನಿಗ್ರಹ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಶ್ರೀಲಂಕಾದ ಬ್ಯಾಟಿಂಗ್ ದಿಗ್ಗಜ ಸನತ್ ಜಯಸೂರ್ಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸೋಮವಾರ ಐಸಿಸಿ ಈ ವಿಷಯವನ್ನು ದೃಢಪಡಿಸಿದೆ.

ಐಸಿಸಿ ಭ್ರಷ್ಟಾಚಾರ ನಿಗ್ರಹ ಘಟಕ ನಡೆಸಿದ ಎಲ್ಲ ತನಿಖೆಯ ವೇಳೆ ಶ್ರೀಲಂಕಾದ ಮಾಜಿ ನಾಯಕ ಹಾಗೂ ಸ್ಫೋಟಕ ಆರಂಭಿಕ ದಾಂಡಿಗ ಜಯಸೂರ್ಯ ಸರಿಯಾಗಿ ಸಹಕಾರ ನೀಡಿಲ್ಲ ಎಂದು ಐಸಿಸಿ ಹೇಳಿಕೆಯೊಂದರಲ್ಲಿ ತಿಳಿಸಿದೆ. 49ರ ಹರೆಯದ ಜಯಸೂರ್ಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ತನಿಖೆಗೆ ನಿರ್ಣಾಯಕವಾಗಿರುವ ಸಾಕ್ಷಿಗಳನ್ನು ಮರೆಮಾಚಿದ, ನಾಶಗೊಳಿಸಿದ ಅಥವಾ ತಿರುಚಲು ಪ್ರಯತ್ನಿಸಿದ ಆರೋಪದಲ್ಲಿ ಐಸಿಸಿ ಪ್ರಕರಣ ದಾಖಲಿಸಿಕೊಂಡಿದೆ. ಪ್ರಕರಣದ ಬಗ್ಗೆ ಉತ್ತರಿಸಲು ಜಯಸೂರ್ಯಗೆ ಎರಡು ವಾರಗಳ ಕಾಲಾವಕಾಶ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News