ಕರ್ನಾಟಕ ಪತ್ರಕರ್ತರ ಸಂಘ: ಬಂಟ್ವಾಳ ತಾಲೂಕು ಪದಾಧಿಕಾರಿಗಳ ಆಯ್ಕೆ

Update: 2018-10-16 13:14 GMT
ಫಾರೂಕ್ - ಪ್ರಸಾದ್

ಬಂಟ್ವಾಳ, ಅ. 16: ಕರ್ನಾಟಕ ಪತ್ರಕರ್ತರ ಸಂಘ ಇದರ ಬಂಟ್ವಾಳ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಫಾರೂಕ್ ಗೂಡಿನಬಳಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ಪತ್ರಕರ್ತರ ಸಂಘದ ದ.ಕ. ಜಿಲ್ಲಾ ಕಾರ್ಯದರ್ಶಿ ಐಸಾಕ್ ರಿಚರ್ಡ್ ಅವರ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನಲ್ಲಿ ಸೋಮವಾರ ನಡೆದ ಸಂಘದ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದೆ.

ಕಾರ್ಯದರ್ಶಿಯಾಗಿ ವಿ.ಟಿ. ಪ್ರಸಾದ್, ಉಪಾಧ್ಯಕ್ಷರಾಗಿ ಪಿ.ಎಂ. ಅಶ್ರಫ್ ಪಾಣೆಮಂಗಳೂರು, ಕೋಶಾಧಿಕಾರಿಯಾಗಿ ವಿಶ್ವನಾಥ್ ಬಂಟ್ವಾಳ ಅವಿರೋಧ ವಾಗಿ ಆಯ್ಕೆಯಾದರು. ಮೋಹನ್ ಕೆ. ಶ್ರೀಯಾನ್ ರಾಯಿ ಸ್ವಾಗತಿಸಿ, ಲತೀಫ್ ನೇರಳಕಟ್ಟೆ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News