ಪತ್ನಿ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ

Update: 2018-10-16 14:03 GMT

ದಾವಣಗೆರೆ,ಅ.16 :ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ್ದ ಆಪಾದಿತನಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 5 ಸಾವಿರ ರೂ ದಂಡ ವಿಧಿಸಿ ಮಂಗಳವಾರ ತೀರ್ಪು ನೀಡಿದೆ.

ಘಟನೆ ವಿವರ : ಚನ್ನಗಿರಿ ತಾಲೂಕಿನ ಜೋಳದಾಳ ಗ್ರಾಮದ ಹೆಚ್.ಮಂಜುನಾಥ ತಮ್ಮ ಪತ್ನಿ ಅನಿತಾ ಇವರ ನಡೆತೆಯ ಬಗ್ಗೆ ಸಂಶಯಗೊಂಡು 23.12.2016 ರಂದು ಸಂಜೆ 4.45 ಸಮಯದಲ್ಲಿ ಜೋಳದಾಳ ಗ್ರಾಮದ ಅಮ್ಮನ ಗುಡ್ಡಕ್ಕೆ ಹೋಗುವ ರಸ್ತೆಯಲ್ಲಿ ತನ್ನ ಮಕ್ಕಳ ಎದುರಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ.

ಈ ಪ್ರಕರಣವನ್ನು ದಾಖಲಿಸಿಕೊಂಡ ಚನ್ನಗಿರಿ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣವನ್ನು ಸುಧೀರ್ಘವಾಗಿ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕುಲಕರ್ಣಿ ಅಂಬಾದಾಸ ಅವರು ಅರೋಪಿಯ ಕೊಲೆ ಮಾಡಿರುವುದು ಸಾಕ್ಷ್ಯಾಧಾರಗಳಿಂದ ಸಾಬೀತಾದ ಹಿನ್ನಲೆಯಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ 5 ಸಾವಿರ ದಂಡ ವಿಧಿಸಿದ್ದಾರೆ.

ಸರಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ಎಸ್.ಎ.ಪಾಟೀಲ್ ವಾದ ಮಂಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News